ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು,ರಾಜ್ಯಪಾಲರ ವಿರುದ್ಧ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಅಗ್ರಹಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ನೇರವಾಗಿ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ಹಗರಣದಲ್ಲಿ ಸಿಲುಕಿದರು ಕೂಡ ತಮ್ಮ ಖುರ್ಚಿ ಬಿಡುತ್ತಿಲ್ಲ. ಅವರು ಭ್ರಷ್ಟಾಚಾರ ಮಾಡಿಲ್ಲ ಅಂದರೆ ಜನ ಯಾಕೆ ಪ್ರತಿಭಟನೆ ಮಾಡುತ್ತಿದ್ದರು. ಎಸ್ಸಿಎಸ್ಟಿ ಪಂಡ್ ಯಾಕೆ ದುರುಪಯೋಗ ಆಗಿದೆ ಎಂಬುದನ್ನ ಮುಖ್ಯಮಂತ್ರಿಗಳು ತಿಳಿಸಬೇಕು.ಮುಖ್ಯಮಂತ್ರಿಯವರ ಪತ್ನಿ ಹೆಸರಲ್ಲಿ ಮುಡಾ ಹಗರಣ ಆರೋಪಿವಿದ್ದರೂ ಹೈಕಮಾಂಡ್ ರಕ್ಷಣೆ ಮಾಡುತ್ತಿದೆ. ರಾಜ್ಯಪಾಲರನ್ನೆ ದೋಷಿ ಎಂದು ಮಾಡಲು ಕಾಂಗ್ರೆಸ್ ಹೊರಟಿದೆ.ಕಾಂಗ್ರೆಸ್ ಪಕ್ಷದ ಈ ದುರಾಡಳಿತದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಮಾತನಾಡಿ, ಭ್ರಷ್ಟಾಚಾರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯಪಾಲರ ವಿಚಾರಣೆಯನ್ನ ಎದುರಿಸಬೇಕು. ತಮ್ಮ ಅಧಿಕಾರಕ್ಕೆ ಕುತ್ತು ಬರುತ್ತದೆಂದು ತಿಳಿದು ರಾಜ್ಯಪಾಲರ ವಿರುದ್ಧವೇ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಸಿಎಂ ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿದ್ದಾರೆ. ಹೀಗಾಗಿ ಸಿಎಂ ತಮ್ಮ ರಾಜ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ
ಗಣಪತಿ ಉಳ್ವೆಕರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಪ್ರಶಾಂತ ನಾಯ್ಕ, ಶಿವಾಜಿ ನರಸಾನಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಶಿವಾನಿ ಶಾಂತಾರಾಮ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರೇಮಕುಮಾರ ನಾಯ್ಕ, ಓಬಿಸಿ ಮೋರ್ಚಾ ಅಧ್ಯಕ್ಷ ರಾಜೇಂದ್ರ ನಾಯ್ಕ ಮಾತನಾಡಿದರು, ಮಂಡಲ ಅಧ್ಯಕ್ಷರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಕಾರ್ಯಕರ್ತರು,
ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.