ಸಿದ್ದಾಪುರ ಭಾನ್ಕುಳಿ ಗೋಸ್ವರ್ಗದಲ್ಲಿ ನಡೆಯುತ್ತಿರುವ ಶಂಕರಪಂಚಮಿ ಉತ್ಸವ

ಆದ್ಯೋತ್ ಸುದ್ದಿನಿಧಿ:
ಸಿದ್ದಾಪುರ ತಾಲೂಕಿನ ಭಾನ್ಕುಳಿ ಗೋಸ್ವರ್ಗದಲ್ಲಿ ನಡೆಯುತ್ತಿರುವ ಶಂಕರಪಂಚಮೀ ಉತ್ಸವದಲ್ಲಿ ಸೋಮವಾರ ಹವ್ಯಕ ಮಹಾಮಂಡಲ ಆಯೋಜನೆಯಲ್ಲಿ “ಪ್ರತಿಭಾ ಪ್ರದರ್ಶನ” ಕಾರ್ಯಕ್ರಮದ ಸಮಾರೋಪ ನಡೆಯಿತು.

ಮಾತೆಯರಿಂದ ಕುಂಕುಮಾರ್ಚನೆ, ಗುರುವಂದನೆ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ದೇವತಾ ನಾಂದಿ, ಋತ್ವಿಗ್ವರಣ, ಮಹಾಸಂಕಲ್ಪ, ಬ್ರಹ್ಮಕೂರ್ಚಹವನ, ಶ್ರೀಮಹಾಗಣಪತಿ ಹವನ, ಶ್ರೀರಾಮತಾರಕ ಹವನ, ಚಂಡಿಹವನ, ಆದಿತ್ಯ ಹವನಗಳು ನಡೆದವು. ಶ್ರೀ ರಾಘವೇಶ್ವರಭಾರತೀ ಶ್ರೀಗಳು ಪೂರ್ಣಾಹುತಿಯಲ್ಲಿ ಪಾಲ್ಗೊಂಡಿದ್ದರಲ್ಲದೇ ಶ್ರೀ ಶಂಕರಗುರುಪೂಜೆ ನೆರವೇರಿಸಿದರು. ಬಿಳಗಿ ಸೀಮೆಯ ಶಿಷ್ಯರಿಂದ ಶ್ರೀಗುರುಭಿಕ್ಷಾ ಸೇವೆ ಜರುಗಿತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಶಿಷ್ಯ ಭಕ್ತರಿಗೆ ಶ್ರೀ ರಾಘವೇಶ್ವರಭಾರತೀ ಶ್ರೀಗಳವರು ಫಲಮಂತ್ರಾಕ್ಷತೆ ಅನುಗ್ರಹಿಸಿದರು.

೨೫ ರಂದು ಶಂಕರಪಂಚಮೀ ಉತ್ಸವದಲ್ಲಿ ಘನರುದ್ರ ಪಾರಾಯಣ, ಶತರುದ್ರ ಹವನ, ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರಿಂದ “ವೇದೋ ನಿತ್ಯಮಧೀಯತಾಂ” ವಿಷಯವನ್ನಾಧರಿಸಿ ಪ್ರವಚನ ನಡೆಯಲಿದೆ. ಸಂಜೆ ಕುಂಭಾಷಿ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ(ರಿ) ಕೊಂಡದಕುಳಿ ಅವರಿಂದ ಯಕ್ಷಗಾನ ಪ್ರದರ್ಶನವಿದೆ. ಘನರುದ್ರ ಪಾರಾಯಣದಲ್ಲಿ ನಾಡಿನ ಹೆಸರಾಂತ ಘನಪಾಠಿಗಳು ಪಾಲ್ಗೊಳ್ಳುತ್ತಿದ್ದಾರೆ

ಸಿದ್ದಾಪುರ ಭಾನ್ಕುಳಿ ಗೋಸ್ವರ್ಗದಲ್ಲಿ ನಡೆಯುತ್ತಿರುವ ಶಂಕರ ಪಂಚಮೀ ಉತ್ಸವದಲ್ಲಿ ಶಿರಸಿ ಸಿದ್ದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆದರು.ಶಿಕ್ಷಣ ಪ್ರಸಾರಕ ಸಮಿತಿಯ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆ ಉಪಸ್ಥಿತರಿದ್ದರು.

ಸಿದ್ದಾಪುರ ಭಾನ್ಕುಳಿ ಗೋಸ್ವರ್ಗದಲ್ಲಿ ನಡೆಯುತ್ತಿರುವ ಶಂಕರ ಪಂಚಮೀ ಉತ್ಸವದಲ್ಲಿ ಶಿರಸಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಉಪೇಂದ್ರ ಪೈ ಶ್ರೀ
ರಾಘವೇಶ್ವರಭಾರತೀಸ್ವಾಮೀಜಿಯವರ ಆಶೀರ್ವಾದ ಪಡೆದರು.

About the author

Adyot

Leave a Comment