ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ಬಿಳಗಿಯಲ್ಲಿ ಸ್ಥಳೀಯ ನಮೋ ಬ್ರಿಗೇಡ್ವತಿಯಿಂದ ಚಕ್ರವರ್ತಿ ಸೂಲಿಬೆಲೆಯವರಿಂದ ನಮೋಭಾರತ ಕಾರ್ಯಕ್ರಮದ ಅಂಗವಾಗಿ ದಿಕ್ಸೂಚಿ ಭಾಷಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿಸೂಲಿಬೆಲೆ,ಕೇವಲ ಉಚಿತವಾಗಿ ನೀಡುವಂತಹ ವಸ್ತುಗಳ ಆಸೆಯಿಂದ ಜನಪ್ರತಿನಿಧಿಗಳ ಆಯ್ಕೆ ಮಾಡುತ್ತಿರುವುದು ದುರಂತದ ಸಂಗತಿ. ಕರ್ನಾಟಕ ಸರ್ಕಾರದ ಬಿಟ್ಟಿ ಭಾಗ್ಯದಿಂದ ರಾಜ್ಯದ
ಆರ್ಥಿಕ ಸ್ಥಿತಿ ಕಂಗೆಟ್ಟಿದೆ ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಉಪಯೋಗಿಸಿ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ. ಜನರನ್ನು ಜಾಗೃತಗೊಳಿಸಿ ರಾಷ್ಟ್ರದಲ್ಲಿ ಮೋದಿ ಸರ್ಕಾರದ ಮೊದಲಿನ ಭಾರತಕೂ ್ಕಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಈಗಿನ ಭಾರತದ ನಡುವಿನ ವ್ಯತ್ಯಾಸವನ್ನು ಜನತೆಗೆ ಮನದಟ್ಟು ಮಾಡಲು ನಮೋ ಬ್ರಿಗೇಡ್ ಕೆಲಸ ಮಾಡುತ್ತಿದೆ.
ಬೋಪೋರ್ಸ್ ದಿಂದ ಹಿಡಿದು ಅಗಸ್ತಾ ವೆಸ್ಟ್ಲ್ಯಾಂಡ್ಡೀಲ್ ನಲ್ಲಿಕಿಕ್ ಬ್ಯಾಕ್ ಪಡೆಯುತ್ತಿದ್ದವರು ಮೋದಿಯನ್ನು ಕಳೆದ ೧೦ ವರ್ಷಗಳಿಂದ ವಿರೋದಿಸುತ್ತಿದ್ದಾರೆ. ಈ ದೇಶದ ಕೆಲವೇ ಕೆಲವು ಕೋಟಿ ಜನ ಕಾಂಗ್ರೆಸ್ಗೆ ಮತ ಹಾಕುವವರಿದ್ದರೆ ನೂರಾರು ಕೋಟಿಜನ ಮೋದಿಜಿಯವರನ್ನು ಹೃದಯದಲ್ಲಿಟ್ಟು ಪ್ರೀತಿಸುತ್ತಿದ್ದಾರೆ. ಕಳೆದ ೫೦೦ ವರ್ಷಗಳಿಂದ ಆಗದ ಶ್ರೀರಾಮ ಮಂದಿರ ನರೇಂದ್ರ ಮೋದಿ ಅವಧಿಯಲ್ಲಿ ಆಗಿದೆ.ರಾಮ ಮಂದಿರ ನಿರ್ಮಾಣ ವಿರೋಧಿಸಿ ಕೋರ್ಟನಲ್ಲಿ ವಾಧಿಸಲು ಕಾಂಗ್ರೆಸ್ ೨೪ ವಕೀಲರನ್ನು ನೇಮಿಸಿತು. ಅದರ ಉಸ್ತುವಾರಿ ವಹಿಸಿಕೊಂಡವರೇ ಕಾಂಗ್ರೇಸ್ ನಾಯಕ ಕಪಿಲ್ ಸಿಬಲ್.
ಆದರೆ ಬಿಜೆಪಿಯ ಪ್ರಯತ್ನದಿಂದ ಇಂದು ರಾಮಮಂದಿರ ನಿರ್ಮಾಣವಾಗಿದೆ.ನಮ್ಮ ದೇಶವನ್ನು ಕಡೆಗಣಿಸುತ್ತಿದ್ದ ಜಗತ್ತಿನ ರಾಷ್ಟçಗಳು ಮೋದಿಯವರ ಸಮರ್ಥ ನಾಯಕತ್ವದ ಪರಿಣಾಮದಿಂದ ಇಂದು ರಾಜಮರ್ಯಾದೆ ನೀಡುತ್ತಿವೆ.ಮುಂಬರುವ ಲೋಕಸಭಾಚುಣಾವಣೆಯಲ್ಲಿಎಲ್ಲ ಗೊಂದಲಗಳನ್ನು ಬದಿಗಿಟ್ಟು ನಮ್ಮ ಅಭ್ಯರ್ಥಿ ಮೋದಿ ಎಂದು ಮತ ಹಾಕಿ. ಮೋದಿಯನ್ನು ಗೆಲ್ಲಿಸಿ ಭಾರತವನ್ನು ವಿಶ್ವಗುರು ಸ್ಥಾನದಲ್ಲಿ ನಿಲ್ಲಿಸೋಣಎಂದರು.
ನಮೋ ಬ್ರಿಗೇಡ್ಜಿಲ್ಲಾ ಸಂಚಾಲಕ ಅಣ್ಣಪ್ಪ ನಾಯ್ಕ ಕಡಕೇರಿ ಪ್ರಾಸ್ತಾವಿಕ ಮಾತನಾಡಿ,ನಮೋ ಬ್ರಿಗೇಡ್ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆಸಾಮಾಜಿಕ ಜಾಲತಾಣಗಳಲ್ಲಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಹಂಚಿಕೊAಡು ಅದರ ಪ್ರಯೋಜನ ಜನರಿಗೆ ತಲುಪುವಂತೆ ಮಾಡಲಾಗುತ್ತಿದೆ ಮುಂಬರುವ ಚುನಾವಣೆಯಲ್ಲಿ ಎಲ್ಲಾ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಮೂಲಕ ಮೋದಿಜಿ ಮತ್ತೋಮ್ಮೆ ಪ್ರದಾನಿಯಾಗಬೇಕು ಎಂಬ ಸಂಕಲ್ಪವನ್ನು ನಮ್ಮ ಸಂಘಟನೆ ಹೊಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಮಮಂದಿರ ಕರಸೇವಕರಾದ ಲಕ್ಷ್ಮಣ ಲೋಬಿ, ಶ್ರೀಧರ ಬಿಕ್ಕಳಸೆ, ಗೋಪಾಲ ತಂಗಾರುಮನೆ, ಅನಂತಊರತೋಟ, ಹಳಿಯಾಳದ ಉಮೇಶ ಬಸಲಿಂಗಪ್ಪ ಬೊಳಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಬಿಳಗಿಯ ಶ್ರೀರಾಮ ಅಕ್ಕಿ ಗಿರಣಿ ಮಾಲಕ ದೇವದಾಸ್ ಪೈ ಉಪಸ್ಥಿತರಿದ್ದರು.
ಕೇಶವ್ ಮೊಗೇರ ವಂದೇ ಮಾತರಂಗೀತೆ ಹಾಡಿದರು.ಬಿಜೆಪಿ ಜಿಲ್ಲಾರೈತ ಮೋರ್ಚಾಉಪಾಧ್ಯಕ್ಷ
ಆದರ್ಶ ಪೈ ಬಿಳಗಿ ಸ್ವಾಗತಿಸಿದರು.ಗಿರೀಶಆಲ್ಮನೆ ನಿರೂಪಿಸಿದರು.