ಮೋದಿ ಸರಕಾರಕ್ಕೆ 11 ವರ್ಷ: ಕಾರವಾರದಲ್ಲಿ ಕಾರ್ಯಾಗಾರ


ಆದ್ಯೋತ್ ಸುದ್ದಿನಿಧಿ:
ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರಕ್ಕೆ11 ವರ್ಷ ತುಂಬಿದ್ದು ಈ ಕುರಿತು ಬಿಜೆಪಿ ಜಿಲ್ಲಾ ಘಟಕದಿಂದ ಕಾರವಾರದಲ್ಲಿಸಂಕಲ್ಪದಿಂದಸಾಧನೆಯವರೆಗೆ” ಹೆಸರನಲ್ಲಿ ಕಾರ್ಯಾಗಾರ ನಡೆಸಲಾಯಿತು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ನರೇಂದ್ರ ಮೋದಿಯವರು ಅಂತ್ಯೋದಯ ಅನುಷ್ಠಾನಕ್ಕೆ ಒತ್ತು ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿ, ಸೇವೆ – ಸುಶಾಸನ ಮತ್ತು ಬಡವರ ಕಲ್ಯಾಣ ಯೋಜನೆ ಜಾರಿಗೆ ತಂದಿರುವುದನ್ನು ವಿವರಿಸಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಮೋದಿಯವರು ದೇಶದ 140 ಕೋಟಿ ಜನರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಆಹಾರ, ಆರೋಗ್ಯ, ಮಹಿಳೆಯರ ಸಬಲೀಕರಣ, ಶಿಕ್ಷಣ, ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ವಿಶ್ವದಲ್ಲಿ ಭಾರತೀಯರು ಇಂದು ಹೆಮ್ಮೆಯಿಂದ ನಾವು ಭಾರತೀಯರು ಇಂದು ಹೇಳಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ, ಇದು ಮೋದಿಯವರು ಭಾರತವನ್ನು ವಿಶ್ವಗುರು ಮಾಡುವಲ್ಲಿ ನಿರಂತರ ಶ್ರಮಿಸುತ್ತಿರುವುದೇ ಕಾರಣವಾಗಿದೆ ಜಾಗತಿಕವಾಗಿ 4ನೇ ಆರ್ಥಿಕ ಶಕ್ತಿಯಾಗಿ ಭಾರತ ಇಂದು ಹೊರಹೊಮ್ಮಿದೆ ದೇಶ ಮೊದಲು ಎಂಬುದೇ ಬಿಜೆಪಿಯ ವಿಚಾರ ಆಗಿರುವುದು, ಕೇಂದ್ರದ ಎನ್.ಡಿ.ಎ ಸರ್ಕಾರ ರಾಷ್ಟ್ರೀಯ ವಿಚಾರಕ್ಕೆ ಮನ್ನಣೆ ನೀಡಿರುವುದು ಆತ್ಮ್ಮನಿರ್ಭರತೆಯ ಕಡೆಗೆ ರಾಷ್ಟ್ರ ಸಾಗಲು ಕಾರಣವಾಗಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಕರ್ಕಿಮಾತನಾಡಿ, ಮೋದಿ ಸರಕಾರದ 11ವರ್ಷದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಪ್ರಮುಖವಾಗಿ 4 ಕಾರ್ಯಕ್ರಮಗಳ ಆಯೋಜನೆ, ಜಿಲ್ಲಾ ಹಾಗೂ ಮಂಡಲ ತಂಡಗಳ ರಚನೆ ಹಾಗೂ ಅವರು ಮುಂದಿನ ದಿನಗಳಲ್ಲಿ ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ್ ಮಾತನಾಡಿ ಪಕ್ಷ ಸಂಘಟನೆಯಲ್ಲಿ ನಿರಂತರ ಕಾರ್ಯಚಟುವಟಿಕೆ ಇರುವುದು ಬಿಜೆಪಿಯಲ್ಲಿ ಮಾತ್ರ ಹಾಗೂ ಪಕ್ಷದಲ್ಲಿ ಕಾರ್ಯಕರ್ತರಿಗೆ ಗೌರವ ಇರುವುದು ಕೇವಲ ಬಿಜೆಪಿ ಲಯಲ್ಲಿ ಮಾತ್ರ ನೋಡಲು ಸಾಧ್ಯ. ಒಂದೆಡೆ ಪ್ರಧಾನ ಮಂತ್ರಿ ಮೋದಿಯವರು ಜನಪರ ಯೋಜನೆಗಳನ್ನು ನೀಡುತ್ತಿದ್ದಾರೆ ಆದರೆ ಬಡ ಜನತೆಗೆ ನೀಡಿದ ಈ ಕಾರ್ಯಕ್ರಮಗಳನ್ನು, ಇಲ್ಲಿನ ರಾಜ್ಯ ಸರಕಾರ ತಡೆ ಹಿಡಿಯುತಿದೆ, ಜನೌಷಧಿ ಅಂಗಡಿಗಳನ್ನ ಮುಚ್ಚುವ ಹುನ್ನಾರ ನಡೆಸಿದೆ . ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ವೃಕ್ಷಾರೋಪಣ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯ ನಾಯಕತ್ವ ನೀಡಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸೋಣ ಎಂದರು.

ಈ ಸಂದರ್ಭದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಂಸದರಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಹಾಗೂ ರಾಜ್ಯ ಉಪಾಧ್ಯಕ್ಷರು ರೂಪಾಲಿ ನಾಯ್ಕ್ ಗೌರವ ಸಮರ್ಪಣೆ ಮಾಡಿದರು.

ರೂಪಾಲಿ ನಾಯ್ಕ “ವಿಕಸಿತ ಭಾರತ ಸಂಕಲ್ಪ ಪತ್ರ” ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಾಗಾರದಲ್ಲಿ ಮಾಜಿ ಶಾಸಕ ಸುನಿಲ್ ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ ಎಂ ಜಿ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಆರತಿ ಗೌಡ, ಅಶೋಕ ಚಲವಾದಿ, ಸುಬ್ರಾಯ ವಾಳ್ಕೆ, ಸಂಜಯ ಸಾಳುಂಕೆ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾದ ಎಂ ಜಿ ಭಟ್, ಕಾರವಾರ ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ, ಜಿಲ್ಲಾ ಮೋರ್ಚಾ ಅಧ್ಯಕ್ಷರು ಉಪಸ್ಥಿತರಿದ್ದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಸಂಚಾಲಕರಾದ ಶಿವಾಜಿ ನರಸಾನಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ನಿರ್ವಹಿಸಿದರು, ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಶಾಂತ ನಾಯ್ಕ ಅವರು ವಂದಿಸಿದರು.

About the author

Adyot

Leave a Comment