ಮುಂಡಗೋಡ: ಆಂತರಜಿಲ್ಲಾ ಕಳ್ಳನ ಬಂಧನ

ಆದ್ಯೋತ್ ಸುದ್ದಿನಿಧಿ:
ಅಂತರ ಜಿಲ್ಲಾ ಮನೆ ಕಳ್ಳನ ಬಂಧನ 5 ಲಕ್ಷ ರೂ.ಮೌಲ್ಯದ ಬಂಗಾರ,ಬೆಳ್ಳಿಯ ಆಭರಣ,ನಗದು ಹಣ ವಶಕ್ಕೆ
ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ 2 ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲನ್ನು ದೂಡಿ ಚಿಲಕ ತೆಗೆದು ಮನೆಯ ಒಳಗೆ ಪ್ರವೇಶಿಸಿ ಮನೆ ಕಳ್ಳತನ ಮಾಡುತ್ತಿದ್ದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.
ಅಕ್ಟೋಬರ್-19ರಂದು ಮುಂಡಗೋಡ ಠಾಣಾ ವ್ಯಾಪ್ತಿಯ ಮೈನಳ್ಳಿಯಲ್ಲಿ ಒಂದೇ ದಿನ ಎರಡು ಮನೆ ಕಳ್ಳತನವಾಗಿದ್ದು ಆರೋಪಿಯು ಕಳುವು ಮಾಡುವಾಗ ಮನೆಯ ಜನರು ಎಚ್ಚರವಾಗಿ ಅವನನ್ನು ಬೆನ್ನು ಹತ್ತಿ ಹಿಡಿಯಲು ಪ್ರಯತ್ನಿಸಿದರಾದರೂ ಆರೋಪಿಯು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದನು.
ಎಸ್.ಪಿ. ಮತ್ತು ಡಿ.ಎಸ್.ಪಿ. ಮಾರ್ಗದರ್ಶನದಲ್ಲಿ ಮುಂಡಗೋಡ ಠಾಣಾ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು
ಅ.27 ರಂದು ಆರೋಪಿ ಕೃಷ್ಣ ಲಚ್ಚಪ್ಪ ಲಮಾಣಿ(38) ಎಂಬವನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ತೀವ್ರವಿಚಾರಣೆಗೆ ಒಳಪಡಿಸಿದಾಗ,2018 ರಿಂದ ಇಲ್ಲಿಯವರೆಗೆ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದನು.

ಆರೋಪಿಯಿಂದ ಕಳವು ಮಾಡಿದ ಬಂಗಾರದ ಆಭರಣಗಳು ಸುಮಾರು 70 ಗ್ರಾಂ (ಅಂದಾಜು ಮೌಲ್ಯ3,50,000ರೂ.) 200ಗ್ರಾಂ ಬೆಳ್ಳಿಯ ಆಭರಣಗಳು(ಅಂದಾಜು ಮೌಲ್ಯ15,000ರೂ) ಹಾಗೂ 31,000 ರೂ ನಗದು ಹಣ ವಶಪಡಿಸಿಕೊಳ್ಳಲಾಗಿದೆ.
ಕಾರವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಪ್ರಕಾಶ ದೇವರಾಜು. , ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಮತ್ತು ಶಿರಸಿ ಡಿ.ಎಸ್.ಪಿ. ಜಿ. ಟಿ. ನಾಯಕ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಭುಗೌಡ. ಡಿ. ಕೆ, ಮಹಿಳಾ ಪಿ.ಎಸ್.ಐ.ಮೋಹಿನಿ ಶೆಟ್ಟಿ. ಪಿ.ಎಸ್.ಐ. ಬಸವರಾಜ ಮಬನುರ, ಎ.ಎಸ್.ಐ. ಅಶೋಕ ರಾಠೋಡ, ಎ.ಎಸ್.ಐ. ಖೀರಪ್ಪಾ ಘಟಕಾಂಬಳೆ, ಎ.ಎಸ್.ಐ. ಶೇಡಜಿ ಚವ್ಹಾಣ ಹಾಗೂ ಸಿಬ್ಬಂದಿಯವರಾದ ಧರ್ಮರಾಜ ನಾಯ್ಕ, ರಾಘವೇಂದ್ರ ನಾಯ್ಕ, ಭಗವಾನ ಗಾಂವಕರ, ವಿನೋದಕುಮಾರ, ಜಿ. ಬಿ. ಅರುಣ ಬಾಗೇವಾಡಿ, ಶರತ ದೇವಳಿ, ತಿರುಪತಿ ಚೌಡಣ್ಣವರ, ವಿವೇಕ ಪಟಗಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

About the author

Adyot

Leave a Comment