ರಾಮಚಂದ್ರಾಪುರಮಠಕ್ಕೆ ರಿಲೀಫ್ ನೀಡಿದ ನ್ಯಾಯಾಲಯ

ಆದ್ಯೋತ್ ನ್ಯೂಸ್ ಡೆಸ್ಕ್ : ಎದುರ್ಕಳ ಈಶ್ವರ ಭಟ್ ಮತ್ತಿತರರು ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರಮಠದ ಅರ್ಜಿಯನ್ನು ಮಾನ್ಯ ಮಾಡಿದ ಸರ್ವೋಚ್ಚ ನ್ಯಾಯಾಲಯ, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನಿರ್ದೇಶಿಸಿದೆ.


ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಾಮಚಂದ್ರಾಪುರಮಠದ ವಿರುದ್ಧ ಹೂಡಿರುವ ದಾವೆಯು ನ್ಯಾಯಯುತವಾಗಿದ್ದಲ್ಲವೆಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿದ್ದು, ಇಂದು ಕೂಲಂಕುಶವಾಗಿ ಅರ್ಜಿಯನ್ನು ವಿಚಾರಣೆ ನಡೆಸಿದ ಮಾನ್ಯ ಸರ್ವೋಚ್ಚ ನ್ಯಾಯಾಲಯವು, ಉಚ್ಚ ನ್ಯಾಯಾಲಯದಲ್ಲಿರುವ ಪ್ರಕರಣದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ.


ಈ ಹಿಂದೆ ಟಿ.ಟಿ. ಹೆಗಡೆ ಮತ್ತು ಪ್ರಶಾಂತ್ ಮತ್ತು ಲೋಕೇಶ್ ಎಂಬುವವರು ಸೆಕ್ಷನ್ 92 ಅಡಿಯಲ್ಲಿ ಮಠದ ವಿರುದ್ಧ ಆರೋಪಗಳನ್ನು ಹೊರಿಸಿ, ಸೆಷನ್ ಕೋರ್ಟ್ ಬೆಂಗಳೂರಿನಲ್ಲಿ ದಾವೆ ಹೂಡಿದ್ದರು. ಸದರಿ ಎರಡೂ ಅರ್ಜಿಗಳೂ ವಜಾ ಆಗಿರುವುದನ್ನು ಮಠದ ಪರ ವಕೀಲರು ವಾದದ ಸಮಯದಲ್ಲಿ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಗಮನಿಸಿದ ನ್ಯಾಯಾಧೀಶರು ಸೆಕ್ಷನ್ 92 ಮೊಕದ್ದಮೆ ಬಾಕಿ ಇರುವಾಗ ಅಥವಾ ವಜಾಗೊಳಿಸಿದಾಗ ಪಿಐಎಲ್‌ನಲ್ಲಿ ಅಂತಹ ಪ್ರಾರ್ಥನೆಗಳನ್ನು ನೀಡಬಹುದೇ ಎಂದು ನಾವು ಪರಿಶೀಲಿಸುತ್ತೇವೆ ಅಂದರು.

About the author

Adyot

Leave a Comment