ಶಿವರಾಮ್ ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಯಲ್ಲಾಪುರ : ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ದರ್ಜೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.


ಕಳೆದ ಚುನಾವಣೆಯಲ್ಲಿ ಹೆಬ್ಬಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಿಂತು ಕಡಿಮೆ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ನಂತರ ನಡೆದ ಬೆಳವಣಿಗೆಗಳಲ್ಲಿ ಅನರ್ಹರಾಗಿ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಿಂತು ಭರ್ಜರಿ ಜಯ ಸಾಧಿಸಿದ್ದರು. ಈಗ ನಡೆದ ಸಂಪುಟ ವಿಸ್ತರಣೆಯಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇದರಿಂದ ಜಿಲ್ಲೆಗೆ ಒಂದು ಸಚಿವ ಸ್ಥಾನ ಲಭಿಸಿದಂತಾಗಿದೆ.

About the author

Adyot

1 Comment

  • ಅಭಿನಂದನೆಗಳು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲೆಂದು ಆಶಿಸುವಾ,

Leave a Comment