ಚುಟುಕು ಕವಿ ವಿಡಂಬಾರಿ ಇನ್ನಿಲ್ಲ

ಆದ್ಯೋತ್ ನ್ಯೂಸ್ ಡೆಸ್ಕ್
ನಾಡಿನ ಹಿರಿಯ ಕವಿ, ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಡಂಬಾರಿ ಎಂದೇ ಖ್ಯಾತರಾಗಿರುವ ವಿಷ್ಣು ಭಂಡಾರಿಯವರು ಗುರುವಾರ ರಾತ್ರಿ ನಮ್ಮನ್ನಗಲಿದ್ದಾರೆ.


ಹೊನ್ನಾವರ ತಾಲೂಕಿನ ಕಡತೋಕದ ತಮ್ಮ ಮಗಳ ಮನೆಯಲ್ಲಿ ವಾಸವಿದ್ದ ಅವರಿಗೆ 85 ವರ್ಷ ವಯಸ್ಸಾಗಿತ್ತು.
1935 ಫೆಬ್ರುವರಿ 29 ಜನಿಸಿದವರು. ದೇವದಾಸಿಯ ಮಗನಾಗಿ ಹುಟ್ಟಿ ಈ ಸಮಾಜದ ಬದಲಾವಣೆಗೆ ತನ್ನ ಕೆಲಸ, ಚಿಂತನೆಗಳ ಮೂಲಕ ಕೊನೆಯ ವರೆಗೆ ಶ್ರಮಿಸಿದವರು. ಕಡುಬಡತನದ ಮಧ್ಯೆಯೂ ಮಾನವೀಯ ಮೌಲ್ಯಗಳಿಗಾಗಿ ತುಡಿದವರು. ಸದಾ ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡ ಇವರು ಮೂಢನಂಬಿಕೆ ವಿರುದ್ಧ ಪ್ರಖರವಾಗಿ ಚುಟುಕು ಬರೆಯುತ್ತಿದ್ದರು. ಅಂಚೆ ಪೇದೆಯ ಆತ್ಮಕತೆಯನ್ನೂ ಒಳಗೊಂಡು ಐದಕ್ಕೂ ಹೆಚ್ಚು ಪ್ರಕಟಿತ ಬರಹಗಳನ್ನು ಹೊರತಂದಿದ್ದಾರೆ.

About the author

Adyot

1 Comment

  • ಬದುಕಿನುದ್ದಕ್ಕೂ ನೋವನುಂಡು ಚುಟುಕು ಗಳ ಮೂಲಕ ಬದುಕಿನ ಅರ್ಥತಿಳಿಸಿದ ವಿಡಂಬಾರಿ ಯವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.🙏

Leave a Comment